ಅಂತಿಮವಾಗಿ ಮನೆ ಹಿಂದಿನ ತೋಟದಲ್ಲಿ ಮುರಳಿ ಶೆಟ್ಟಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಮೃತರಿಗೆ ಓರ್ವ ಪುತ್ರಿ ಮಾತ್ರವೇ ಇದ್ದ ಕಾರಣ ನಾಲ್ವರು ಒಟ್ಟಾಗಿ ಚಿತೆಗೆ ಅಗ್ನಿ ಸ್ಪರ್ಶ ನೆರವೇರಿಸಿದ್ದರು. ಮಗಳು ಸಮ್ಯಾ, ಅಣ್ಣನ ಮಗ ಸಾರಂಗ್, ಸಹೋದರ ಮುರುಳಿಧರ್ ಶೆಟ್ಟಿ, ಸುಧಾಕರ್ ಶೆಟ್ಟಿ ಚಿತೆಗೆ ಬೆಂಕಿ ಇಟ್ಟಿದ್ದಾರೆ. ಈ ವೇಳೆ ಪತಿಯ ಚಿತೆಯ ಮುಂದೆ ನಿಂತಿದ್ದ ಪತ್ನಿ ಸ್ವರ್ಣ ದುಃಖಿತರಾದರು.