ಶ್ರೀರಾಮನ ಕುರುತು ಅವಹೇಳನಕಾರಿ ಹೇಳಿಕೆ ನಿಡುವುದು ಸರಿಯಲ್ಲ. ಭಗವಾನ್ ಉಡುಪಿಗೆ ಬಂದು ಕಾಣಲಿ, ಹಿಂದೊಮ್ಮೆ ಸಹ ಬಹಿರಂಗ ಚರ್ಚೆಗೆ ಮೈಸೂರಿನಲ್ಲಿ ಏರ್ಪಾಡು ಮಾಡಲಾಗಿತ್ತಾದರೂ ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಸರ್ಕಾರ ಇದನ್ನು ಆಗಗೊಡಲಿಲ್ಲ. ಈಗ ನಾನು ಅವರೊಬ್ಬರೇ ಉಡುಪಿ ಮಠಕ್ಕೆ ಬಂದು ನನ್ನನ್ನು ಕಾಣಲಿ, ನಾನು ಚರ್ಚೆಗೆ ಸಿದ್ದನಿದ್ದೇನೆ. ಅವರೊಮ್ಮೆ ಬರಲಿಲ್ಲವಾದರೆ ಅವರಿಗೆ ಧೈರ್ಯವಿಲ್ಲ ಎಂದೇ ಭಾವಿಸುತ್ತೇನೆ ಎಂದು ಶ್ರೀಗಳು ನುಡಿದಿದ್ದಾರೆ.