ಈ ಬಗ್ಗೆ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ದೇಶದ ಪ್ರವಾಸೋಧ್ಯಮ ಉತ್ತೇಜನಕ್ಕಾಗಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ರೋಪ್ ವೇ ಯೋಜನೆ ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆ ಅನ್ವಯ ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಅಥವಾ ರೋಪ್ ವೇ ಅಳವಡಿಸಲು ನಿಧಿ ಮೀಸಲಿರಿಸಲಾಗಿದೆ. ಈ ಯೋಜನೆ ಅನ್ವಯ ಕರ್ನಾಟಕದ ನಂದಿಬೆಟ್ಟ, ಮಧುಗಿರಿ, ಯಾದಗಿರಿ ಬೆಟ್ಟಗಳಲ್ಲಿ ಶೀಘ್ರ ರೋಪ್ ವೇ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.