ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಕಾಣಿಸಿಕೊಂಡ ಹಳದಿ ಮಿಶ್ರಿತ ಬೆಂಕಿ
ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಕಾಣಿಸಿಕೊಂಡ ಹಳದಿ ಮಿಶ್ರಿತ ಬೆಂಕಿ

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಎರಡು ಬಾರಿ ಕಾಣಿಸಿಕೊಂಡ ಬೆಂಕಿ

ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಸಾಯಂಕಾಲ ಎರಡು ಕಡೆ ಬೆಂಕಿ ....
Published on
ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಸಾಯಂಕಾಲ ಎರಡು ಕಡೆ ಬೆಂಕಿ ಕಾಣಿಸಿಕೊಂಡಿದೆ. ಸೇನೆ ಮತ್ತು ಅಗ್ನಿ ಶಾಮಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ ನಂತರ ಕಳೆದ ಸಾಯಂಕಾಲ ಬೆಂಕಿ ಕಾಣಿಸಿಕೊಂಡಿತು. ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಹಿಂದೆ ಬೆಂಕಿ ಕಾಣಿಸಿಕೊಂಡಾಗ ಉಂಟಾದ ದುರ್ಘಟನೆಯನ್ನು ಪರಾಮರ್ಶಿಸಿ ಕೆರೆಯ ಸುತ್ತಮುತ್ತ ಇರುವ 99 ಅಪಾರ್ಟ್ ಮೆಂಟ್ ಗಳಲ್ಲಿ ಚರಂಡಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವಂತೆ ಆದೇಶ ನೀಡಿದ ಮೂರು ದಿನಗಳ ನಂತರ ಈ ದುರ್ಘಟನೆ ಸಂಭವಿಸಿದೆ.
ಕೆರೆಯ ಬಳಿ ಇರುವ ಅಪಾರ್ಟ್ ಮೆಂಟ್ ನಿವಾಸಿ ಸೊನಾಲಿ ಸಿಂಗ್, ಹಳದಿ ಬಿಳಿ ಬಣ್ಣದ ಹೊಗೆ ನಿನ್ನೆ ಸಾಯಂಕಾಲ 3.30ರ ಸುಮಾರಿಗೆ ಕಾಣಿಸಿಕೊಂಡಿತು. ಈ ಹಿಂದೆ ಬೆಂಕಿ ಕಾಣಿಸಿಕೊಂಡ ಸ್ಥಳದಲ್ಲಿಯೇ ನಿನ್ನೆ ಕೂಡ ಬೆಂಕಿ ಕಾಣಿಸಿಕೊಂಡಿತು. ಸುಮಾರು ಅರ್ಧ ಗಂಟೆ ಕಾಲ ಬೆಂಕಿ ಹತ್ತಿ ಉರಿಯಿತು. ನಂತರ ಸಾಯಂಕಾಲ 5.30ರ ಹೊತ್ತಿಗೆ ಬೆಂಕಿ ಮತ್ತೆ ಕಾಣಿಸಿಕೊಂಡಿತು. ಬೆಂಕಿಯ ಧಗೆ ಚೆನ್ನಾಗಿ ಕಂಡಿದೆ ಎಂದು ವಿವರಿಸುತ್ತಾರೆ.
ಮೂವರು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಂಜೆ 7 ಗಂಟೆ ಹೊತ್ತಿಗೆ ಬೆಂಕಿಯನ್ನು ಆರಿಸಿತು ಎಂದು ಸೊನಾಲಿ ಸಿಂಗ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com