ಪರಿಶಿಷ್ಟ ಜಾತಿಯ ವಿವಿಧ ಕಲ್ಯಾಣ ಯೋಜನೆಗಳಿಗೆ ಹಣ ಹಂಚಿಕೆ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಭೆ ಕರೆದಿದ್ದರು. ಸಭೆಯಲ್ಲಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟಪಡಿಸಬೇಕು ಎಂದು ದಲಿತ ಮುಖಂಡರು ಪಟ್ಟು ಹಿಡಿದರು. ಇದರಿಂದ ಆಕ್ರೋಶಗೊಂಡ ಸಿದ್ದರಾಮಯ್ಯ, ಅದೆಲ್ಲ ಆಮೇಲೆ ಮೊದಲು ಬಜೆಟ್ಗೆ ಸಂಬಂಧಿಸಿದ ಚರ್ಚೆಯಾಗಲಿ ಎಂದಿದ್ದಾರೆ. ನೀವು ಹೀಗೆ ಹೇಳುವುದಾದರೆ ನಾವು ಸಭೆಯಿಂದ ಹೊರ ಹೋಗುತ್ತೇವೆ ಎಂದು ದಲಿತ ಮುಖಂಡರು ಸಭೆಯಿಂದ ಹೊರ ನಡೆದರು.