ಶುಕ್ರವಾರ ರಾತ್ರಿ ಮುದ್ದಿನ ಪಾಳ್ಯದ ಮಾರುತಿ ಬಾರ್'ಗೆ ಅರುಣ್ ಹಾಗೂ ಆತನ ಸ್ನೇಹಿತ ಸೋಮಯ್ಯ ಹೋಗಿದ್ದರು. ಇದೇ ವೇಳೆ ಅವರ ಪಕ್ಕ ಮತ್ತೊಂದು ಟೇಬಲ್ ನಲ್ಲಿದ್ದ ಮೂವರು ಯುವಕರು, ಕುಡಿದ ಅಮಲಿನಲ್ಲಿ ಜೋರಾಗಿ ಮಾತನಾಡುತ್ತಿದ್ದರು. ಈ ವರ್ತನೆಗೆ ಅರುಣ್ ತೀವ್ರ ಅಸಮಾಧಾನಗೊಂಡು ಆ ಗುಂಪಿನಲ್ಲಿದ್ದ ಒಬ್ಬನನ್ನು ದುರುಗುಟ್ಟಿ ನೋಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.