ಕನ್ನಡದಲ್ಲೇ ಭಾಷಣ ಆರಂಭಿಸಿ ಕೆಂಪೇಗೌಡ, ಬಸವೇಶ್ವರ, ಸರ್ ಎಂ ವಿ ಸಂತ ಮಾದಾರ ಚನ್ನಯ್ಯ ಅವರನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನಿಂದ ಭಾರತಕ್ಕೆ ಗೌರವ ಬಂದಿದೆ, ಕೇಂದ್ರ ಸರ್ಕಾರ ಬಡವರ ಜೀವವನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ರಾಜ್ಯಕ್ಕೆ ಕೇವಲ 73 ಸಾವಿರ ಕೋಟಿ ರೂಪಾಯಿ ಅನುದಾನ ನೀಡುತ್ತಿತ್ತು, ಆದರೆ ನಮ್ಮ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ 2 ಲಕ್ಷ ಕೋಟಿ ರೂಪಾಯಿ ನೀಡಲು ನಿರ್ಧರಿಸಿದೆವು, ಆ ಅನುದಾನವನ್ನು ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಅಭಿವೃದ್ದಿಯಾಗಿರುವುದನ್ನು ಯಾರಾದರೂ ಕಂಡಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.