ಇ ಶೌಚಾಲಯ ಸೇರಿ ಸಿದ್ದಪಡಿಸಲಾದ ಶೌಚಾಲಯಗಳು 300 ಇವೆ.16 ಲಕ್ಷ ಕಾರ್ಯಕರ್ತರಿಗೆ ನೀರಿ ಪ್ಯಾಕೆಟ್ ಗಳನ್ನು ವಿತರಿಸಲಾಗುತ್ತದೆ. 13,000 ಪೊಲೀಸ್ ಸಿಬ್ಬಂದಿಯನ್ನು ಬಿಗಿ ಭದ್ರತೆಗೆ ನಿಯೋಜಿಸಲಾಗಿದೆ.
ಬಿಜೆಪಿ ರ್ಯಾಲಿ ಹಿನ್ನೆಲೆಯಲ್ಲಿ ನಗರದ ಹಲವೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ನಾಯಂಡಹಳ್ಳಿ, ಸುಮನಹಳ್ಳಿ, ಡಾ.ರಾಜ್ ಕುಮಾರ್ ಸಮಾಧಿ, ತುಮಕೂರು ರಸ್ತೆ ಬಲತಿರುವು ಪಡೆದು ಗೊರಗುಂಟೆಪಾಳ್ಯ, ಬಿಇಎಲ್, ಹೆಬ್ಬಾಳ ಮೇಲ್ಸೇತುವೆ ಮಾರ್ಗವಾಗಿ ಅರಮನೆ ಮೈದಾನ ಪ್ರವೇಶಿಸಿ ಮಾವಿನಕಾಯಿ ಆವರಣದಲ್ಲಿ ವಾಹನ ನಿಲುಗಡೆ ಮಾಡಬಹುದು.
ಕನಕಪುರ ರಸ್ತೆ ಕಡೆಯಿಂದ ಬರುವ ವಾಹನಗಳು ಕನಕಪುರ ರಸ್ತೆ, ಬನಶಂಕರಿ ದೇವಸ್ಥಾನ ಬಸ್ ನಿಲ್ದಾಣ, ರಾಜಲಕ್ಷ್ಮಿ ಜಂಕ್ಷನ್, ಲಾಲ್ ಬಾಗ್ ಪಶ್ಚಿಮ ಗೇಟ್, ಮಿನರ್ವ ವೃತ್ತ, ಜೆ.ಸಿ.ರಸ್ತೆ, ಟೌನ್ ಹಾಲ್, ಕೆ.ಜಿ.ರಸ್ತೆ, ಮೈಸೂರು ಬ್ಯಾಂಕ್ ಬಳಿ ಬಲ ತಿರುವು ಪಡೆದು ಪ್ಯಾಲೇಸ್ ರಸ್ತೆ, ಬಸವೇಶ್ವರ ವೃತ್ತ, ಹಳೆ ಹೈಗ್ರೌಂಡ್ಸ್ ಅಂಡರ್ ಪಾಸ್, ಜಯಮಹಲ್ ಮೂಲಕ ಸರ್ಕಸ್ ಮೈದಾನ ಪ್ರವೇಶಿಸಬಹುದು.
ಬನ್ನೇರುಘಟ್ಟ ರಸ್ತೆ ಕಡೆಯಿಂದ ಬರುವ ವಾಹನಗಳು ಡೈರಿ ವೃತ್ತ ಬಳಿ ಎಡ ತಿರುವು ಪಡೆದು ಡಾ.ಮರಿಗೌಡ ರಸ್ತೆ,ಲಾಲ್ ಬಾಗ್ ಮುಖ್ಯದ್ವಾರ, ಜೆ.ಸಿ.ರಸ್ತೆ ಮೂಲಕ ಅರಮನೆ ಮೈದಾನಕ್ಕೆ ಬರಬಹುದು. ಹೊಸೂರು ಕಡೆಯಿಂದ ಬರುವ ವಾಹನಗಳು ಮಡಿವಾಳ ಚೆಕ್ ಪೋಸ್ಟ್ ಎಡ ತಿರುವು ಪಡೆದು ಡೈರಿ ವೃತ್ತದ ಮಾರ್ಗದಲ್ಲಿ ಬಂದು ಅರಮನೆ ಮೈದಾನ ಪ್ರವೇಶಿಸಬಹುದು.
ದೊಡ್ಡಬಳ್ಳಾಪುರ ಕಡೆಯಿಂದ ಬರುವವರು ಮೇಜರ್ ಉನ್ನಿಕೃಷ್ಣ ರಸ್ತೆ ಜಂಕ್ಷನ್, ಯಲಹಂಕ ಪೊಲೀಸ್ ಠಾಣೆ ಜಂಕ್ಷನ್, ಬಳ್ಳಾರಿ ರಸ್ತೆ, ಹೆಬ್ಬಾಳ ಮೇಲ್ಸೇತುವೆ ಮೂಲಕ ಹಾಗೂ ಹಳೆ ಮದ್ರಾಸ್ ರಸ್ತೆ ಕಡೆಯಿಂದ ಆಗಮಿಸುವ ವಾಹನಗಳು ಕೆ.ಆರ್.ಪುರ ತೂಗು ಸೇತುವೆ, ಹೆಣ್ಣೂರು ಜಂಕ್ಷನ್, ನಾಗವಾರ, ಹೆಬ್ಬಾಳ ಮೇಲ್ಸೇತುವೆ ಮಾರ್ಗವಾಗಿ ಅರಮನೆ ಮೈದಾನ ಪ್ರವೇಶಿಸುವ ಅವಕಾಶ ಕಲ್ಪಿಸಲಾಗಿದೆ.ಬಳ್ಳಾರಿ ರಸ್ತೆ ಮಾರ್ಗವಾಗಿ ಬರುವ ವಾಹನಗಳು ದೇವನಹಳ್ಳಿ, ಚಿಕ್ಕಜಾಲ, ಹುಣಸಮಾರನಹಳ್ಳಿ, ಕೋಗಿಲು ಜಂಕ್ಷನ್, ಕೊಡಿಗೇಹಳ್ಳಿ ಗೇಟ್ ಹೆಬ್ಬಾಳ ಮಾರ್ಗವಾಗಿ ಬಂದು ಅರಮನೆ ಮೈದಾನ ಪ್ರವೇಶಿಸಲು ಕಲ್ಪಿಸಲಾಗಿದೆ.