ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕಳೆದ ವರ್ಷ ಜುಲೈಯಲ್ಲಿ ಕೇಂದ್ರ ಸರ್ಕಾರದಿಂದ ನಮಗೆ ಅನುಮೋದನೆ ಸಿಕ್ಕಿತು. ಯೋಜನೆ ವಿಧಾನವನ್ನು ಬದಲಾಯಿಸುವ ಕುರಿತು ಈಗ ಸಮಸ್ಯೆ ತಲೆದೋರಿದೆ. ಹೆಚ್ಚಿನ ಪಾರದರ್ಶಕತೆ ಕಾಪಾಡಲು ನಾವು ವಿತರಕರ ಮೂಲಕ ಅನಿಲ ಪೂರೈಕೆ ಮಾಡುತ್ತಿದ್ದೇವೆ. ತೈಲ ಕಂಪೆನಿಗಳ ಬದಲಿಗೆ ವಿತರಕರ ಮೂಲಕ ಏಕೆ ಹೋಗುತ್ತಿದ್ದೇವೆ ಎಂದು ಕೇಂದ್ರ ಸಚಿವಾಲಯಕ್ಕೆ ಪತ್ರ ಬರೆದು ವಿವರಿಸುತ್ತೇವೆ ಎಂದರು.