ಈ ಬಗ್ಗೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಅವರು, ಪರೇಶ್ ಮೇಸ್ತಾ ಸಾವಿನ ಬಳಿಕ ಕರಾವಳಿಯಲ್ಲಿ ಉಂಟಾಗಿದ್ದ ಗಲಭೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೂ ಮೂವರ ವಿರುದ್ಧ ಶಂಕೆ ಮೇರೆಗೆ ತನಿಖೆ ನಡೆಸಲಾಗುತ್ತಿದ್ದು, ಈ ವರೆಗೂ ಪರೇಶ್ ಮೇಸ್ತಾ ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿ ಲಭ್ಯವಾಗಿಲ್ಲ. ಹೀಗಾಗಿ ತನಿಖೆ ಕೊಂಚ ತಡವಾಗಿದ್ದು, ವರದಿ ದೊರೆತ ಬಳಿಕ ತನಿಖೆ ಚುರುಕುಗೊಳ್ಳುತ್ತದೆ ಎಂದು ಹೇಳಿದ್ದಾರೆ.