ಬಸವರಾಜ್ ಮತ್ತು ಯೆಂಕಮ್ಮ ಅವರ ಮಗುವಾದ ಎರಡು ವರ್ಷದ ವೆಂಕಟೇಶ್ ಬುಧವಾರ ಸಾಯಂಕಾಲ ಮೃತಪಟ್ಟಿರುವುದು ತಿಳಿದುಬಂತು. ಕೊಂದ ಬಾಲಕನೇ ವೆಂಕಟೇಶ್ ನ್ನು ಕೊನೆಯ ಸಲ ನೋಡಿದ್ದು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತು. ಅವನನ್ನು ಬಂಧಿಸಿದಾಗ ಪೊಲೀಸರ ಮುಂದೆ, ಕಳೆದೆರಡು ದಿನಗಳಿಂದ ತನ್ನ ಮೂರು ಪಾರಿವಾಳಗಳನ್ನು ಗೂಡಿನಿಂದ ಬಿಟ್ಟ ಕಾರಣ ಸಿಟ್ಟಿನಿಂದ ವೆಂಕಟೇಶ್ ನನ್ನು ಕೊಂದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.