ಬೆಂಗಳೂರು: ವಿಶ್ವವಿದ್ಯಾಲಯದ ಕುಲಪತಿಗಳಾದ ರಾಜ್ಯಪಾಲರಾಗಲಿ, ಉನ್ನತ ಶಿಕ್ಷಣ ಸಚಿವರಾಗಲಿ ಆ ಕಾರ್ಯಕ್ರಮದಲ್ಲಿ ಇರಲಿಲ್ಲ. ಕಳೆದೊಂದು ವರ್ಷದಿಂದ ವಿಶ್ವವಿದ್ಯಾಲಯದ ಉಪಕುಲಪತಿ ಹುದ್ದೆ ಖಾಲಿ ಇರುವುದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾದ ಮುಖ್ಯ ಅತಿಥಿಗಳು ಯಾರೂ ಕೂಡ ಅಲ್ಲಿ ಇರಲಿಲ್ಲ. ವಿದ್ಯಾರ್ಥಿಗಳಿಗಂತೂ ಬೇಸರ ತರಿಸಿತು. ಇದು ನಿನ್ನೆ ಕಳೆದ ಬೆಂಗಳೂರು ವಿಶ್ವವಿದ್ಯಾಲಯದ 53ನೇ ಘಟಿಕೋತ್ಸವದ ಪರಿಸ್ಥಿತಿ.