"ಮೊದಲ ಮಹಡಿಯಲ್ಲಿ ವ್ಯಾಪಾರ ನಡೆಸಲು ಅನುಮತಿ ಪಡೆದ ಹೋಟೆಲ್ ಮಾಲೀಕರು ಕೆಳಮಹಡಿಯಲ್ಲಿಯೇ ಹೋಟೆಲ್ ನಡೆಸುತ್ತಿದ್ದರೂ ಪಾಲಿಕೆ ಅಧಿಕಾರಿಗಳು ಅವರ ವಿರುದ್ಧ ಯಾವ ಕ್ರಮ ಕೈಗೊಂಡಿರಲಿಲ್ಲ. ಅಲ್ಲ್ದೆ ಮ್ಯಾನ್ ಹೋಲ್ ಸ್ವಚ್ಚತೆಗೆ ಕಡ್ಡಾಯವಾಗಿ ಯಂತ್ರಗಳನ್ನು ಬಳಸಬೇಕು, ಮಾನವರನ್ನಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದರೂ ಅದಕ್ಕೆ ವಿರುದ್ಧವಾಗಿ ಮನುಷ್ಯರನ್ನು ಕೆಲಸಕ್ಕೆ ಬಳಸಿಕೊಂಡ ಕಟ್ಟಡದ ಮಾಲೀಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ." ಎಂದು ಕಮಿಷನರ್ ಟಿ ಸುನೀಲ್ ಕುಮಾರ್ ಹೇಳಿದರು.