ಬೆಂಗಳೂರು: ರಾಜ್ಯದ ಮೂರು ಜಿಲ್ಲೆಯವರಷ್ಟೇ ಶುದ್ದ ಕನ್ನಡ ಮಾತನಾಡುತ್ತಾರೆ, ಉಳಿದವರಿಗೆ ಆ ಯೋಗ್ಯತೆ ಇಲ್ಲ ಎಂದಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಗೆ ನಾಡಿನಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ನಟ, ಬಿಜೆಪಿ ನಾಯಕರೂ ಆಗಿರುವ ನವರಸ ನಾಯಕ ಜಗ್ಗೇಶ್ ಸಹ ಖಾರವಾಗಿ ಪ್ರತಿಕ್ರಯಿಸಿದ್ದಾರೆ.