1949 ರ ಡಿ.23 ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ಜನಿಸಿದ್ದ ಕೆಎಸ್ ಪುಟ್ಟಣ್ಣಯ್ಯ ಎಸ್ ಡಿ ಜಯರಾಮ್ ಮಾರ್ಗದರ್ಶನದಲ್ಲಿ 1983 ರಲ್ಲಿ ರೈತ ಸಂಘ ಸೇರಿ 1999 ರಲ್ಲಿ ರೈತ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸಕ್ರಿಯ ರಾಜಕಾರಣದಲ್ಲೂ ಗುರುತಿಸಿಕೊಂಡಿದ್ದ ಪುಟ್ಟಣ್ಣಯ್ಯ 1994 ರಲ್ಲಿ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು. 1999, 2004, 2008 ರ ವಿಧಾನಸಭಾ ಚುನಾವಣೆಗಳಲ್ಲಿ ಸೋಲು ಕಂಡಿದ್ದ ಅವರು 2013 ರಲ್ಲಿ 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.