ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ: ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ

ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ...
ಮಹಮದ್ ಹ್ಯಾರೀಸ್ ನಳಪಾಡ್
ಮಹಮದ್ ಹ್ಯಾರೀಸ್ ನಳಪಾಡ್
Updated on
ಬೆಂಗಳೂರು: ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹಿನ್ನಲೆ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಎಂಬ ಯುವಕನಿಗೆ ಮನಬಂದಂತೆ ಥಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ತ ಸ್ಥಾನದಿಂದ ಮೊಹಮ್ಮದ್ ನನ್ನು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದಾರೆ. 
ಕಳೆದ ರಾತ್ರಿ ರೆಸ್ಟೋರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕೆ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಪಘಾತದಲ್ಲಿ ಮೊದಲೇ ಕಾಲು ಮುರಿದುಕೊಂಡಿದ್ದ ವಿದ್ವತ್ ಊಟಕ್ಕೆಂದು ಯುಬಿ ಸಿಟಿಗೆ ಬಂದಿದ್ದರು. ವಿದ್ವತ್ ಡಾಲರ್ಸ್ ಕಾಲೋನಿಯ ನಿವಾಸಿಯಾದ ಉದ್ಯಮಿ ಲೋಕನಾಥ್ ಎಂಬುವರ ಮಗ ಎಂದು ಪೊಲೀಸರು ತಿಳಿಸಿದ್ದಾರೆ. 
ಮೊಹಮ್ಮದ್ ನಲಪಾಡ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದರು ಪೊಲೀಸರು ಮಾತ್ರ ಆತನನ್ನು ಬಂಧಿಸದೇ ಮೀನಾಮೇಷ ಎಣಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com