ಶಾಸಕನ ಪುತ್ರನ ಗೂಂಡಾಗಿರಿ ಪ್ರಕರಣ: ತಪ್ಪು ಯಾರೇ ಮಾಡಿದರೂ ಅದು ತಪ್ಪೇ- ರಾಮಲಿಂಗಾ ರೆಡ್ಡಿ

ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನಿಂದ ಯುವಕನ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ...
ಗೃಹ ಸಚಿವ ರಾಮಲಿಂಗಾ ರೆಡ್ಡಿ
ಗೃಹ ಸಚಿವ ರಾಮಲಿಂಗಾ ರೆಡ್ಡಿ
Updated on
ಬೆಂಗಳೂರು: ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನಿಂದ ಯುವಕನ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ. 
ಪ್ರಕರಣ ಸಂಬಂಧ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, ಯಾರೇ ತಪ್ಪು ಮಾಡಿದರೂ ಅದು ತಪ್ಪೇ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಎಂದು ಹೇಳಿದ್ದಾರೆ. 
ತಪ್ಪು ಮಾಡಿದವರು ಶಿಕ್ಷೆ ಅನುಭವಿಸುವುದು ಖಚಿತ. ಯಾರೇ ತಪ್ಪು ಮಾಡಿದರೂ ಅದು ತಪ್ಪೇ. ಈ ಹಿಂದೆ ಕೂಡ ಎರಡು, ಮೂರು ಬಾರಿ ಇದೇ ರೀತಿ ನಡೆದಿದೆ. ಈ ಬಗ್ಗೆ ಹ್ಯಾರಿಸ್ ಅವರೂ ಕೂಡ ಒಪ್ಪಿಕೊಂಡಿದ್ದಾರೆ. ಹ್ಯಾರಿಸ್ ಮತ್ತು ಅವರ ಗ್ಯಾಂಗ್ ಬಂಧನಕ್ಕೊಳಗಾಗುವುದು ಖಚಿತ. ಕಾನೂನಿಗಿಂತ ದೊಡ್ಡವರೂ ಯಾರೂ ಇಲ್ಲ. ಪೊಲೀಸರು ಇರುವುದೇ ಆರೋಪಿಗಳನ್ನು ಬಂಧನಕ್ಕೊಳಪಡಿಸಲು. ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಸೆಕ್ಷನ್ ಸರಿಯಿಲ್ಲ ಎಂದರೆ, ಸರಿಪಡಿಸಲು ಹೇಳುತ್ತೇನೆ. ಈ ಬಗ್ಗೆ ಪೊಲೀಸ್ ಆಯುಕ್ತರೊಂದಿಗೂ ಮಾತುಕತೆ ನಡೆಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com