ಶಿವಾಜಿ ಜಯಂತಿ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಕಾರ್ಪೋರೇಟರ್

ಇಲ್ಲಿನ ಶಿವಾಜಿ ವೃತ್ತದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಕಾಂಗ್ರೆಸಿನ ನಾಮನಿರ್ದೇಶಿತ ಕಾರ್ಪೋರೇಟರ್ ಮಂಜುನಾಥ್ ಕದಮ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಬಂದೂಕಿನ (ಸಾಂದರ್ಭಿಕ ಚಿತ್ರ)
ಬಂದೂಕಿನ (ಸಾಂದರ್ಭಿಕ ಚಿತ್ರ)
Updated on

ಧಾರವಾಡ: ಇಲ್ಲಿನ ಶಿವಾಜಿ ವೃತ್ತದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಕಾಂಗ್ರೆಸಿನ ನಾಮನಿರ್ದೇಶಿತ ಕಾರ್ಪೋರೇಟರ್  ಮಂಜುನಾಥ್ ಕದಮ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಜಯಂತೋತ್ಸವದಲ್ಲಿ ಮೈ ಮರೆತಿದ್ದ  ಮಂಜುನಾಥ್ ಕದಂ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ . ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತವಾರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಆತನಿಂದ ಬಂದೂಕು ಪಡೆದು ವಿಚಾರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂದೂಕು ಪರವಾನಗಿ ಹೊಂದಿದ್ದು, ಘಟನೆ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉದ್ದೇಶಪೂರ್ವಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಂದು ವೇಳೆ ತಪಿತಸ್ಥರು ಎಂದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎಂ. ಎನ್. ನಾಗರಾಜ್ ತಿಳಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com