ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಧಾನಮಂತ್ರಿ ಕೌಶಲ್ಯ ಯೋಜನೆಯಡಿಯಲ್ಲಿ ಆರಂಭಿಸಲಾದ ಉಚಿತ ತಾಂತ್ರಿಕ ತರಬೇತಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದ ಬಳಿಕ ಮಾತನಾಡಿದ್ದ ಅನಂತ್ ಕುಮಾರ್ ಹೆಗಡೆಯವರು, ಇಂಗ್ಲೀಷ್'ನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದಿನ ಸವಾಲು, ಶುದ್ಧ ಕನ್ನಡ ಎಲ್ಲೂ ಇಲ್ಲ. ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕನ್ನಡದವರನ್ನು ಹೊರತು ಪಡಿಸಿದರೆ ಇತರರಿಗೆ ಆ ಯೋಗ್ಯತೆಯೇ ಇಲ್ಲ ಎಂದು ಹೇಳಿದ್ದರು.