ಏತನ್ಮಧ್ಯೆ ಪ್ರಕರಣ ಸಂಬಂಧ ಮಾಧ್ಯಮ ವರದಿ ಕುರಿತು ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಕೇಳಿದಾಗ, ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಅವಶ್ಯಕತೆ ಇದ್ದರೆ ನಾರಾಯಣಸ್ವಾಮಿ ಅವರನ್ನು ಬಂಧಿಸಿ, ಕೂಡಲೇ ಕಾನೂನು ರೀತಿ ಕ್ರಮ ತೆಗೆದುಕೊಳ್ಳಿ ಎಂದು ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.