ಇದೇ ವೇಳೆ ಮಾಧ್ಯಮಗಳ ವಿರುದ್ಧ ಕಿಡಿಕಾರಿರುವ ಅವರು, ಮಾಧ್ಯಮಗಳು ರಾಜ್ಯಕ್ಕಾಗಿ 9 ವರ್ಷಗಳ ಸಮರ್ಪಣೆ, ನಂಬಿಕಸ್ತ ಸೇವೆ, ಅಭಿವೃದ್ಧಿ ಕಾರ್ಯಗಳನ್ನು ನಾಶಮಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ವಿರೋಧ ಪಕ್ಷಗಳು ಎಂತಹ ಕೀಳು ಮಟ್ಟದಲ್ಲಿ ಪಾತ್ರವಹಿಸುತ್ತಿವೆ ಎಂಬುದು ಬಹಳ ಬೇಸರವನ್ನುಂಟು ಮಾಡಿದೆ. ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ತನಿಖೆ ಪ್ರಗತಿಯಲ್ಲಿದ್ದು, ತನಿಖೆ ಶೇ.100ರಷ್ಟು ಸಹಕಾರವನ್ನು ನೀಡುತ್ತೇನೆಂದು ತಿಳಿಸಿದ್ದಾರೆ.