ಏಕ ಕಾಲದಲ್ಲಿ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡಲು ಸಾಧ್ಯವಿಲ್ಲ, ಪ್ರಕರಣವನ್ನು ಕೂಡಲೇ ಸಿಸಿಬಿ ಪೊಲೀಸರಿಗೆ ವರ್ಗಾಯಿಸಬೇಕಿದೆ, ಪ್ರಕರಣದ ಪ್ರಮುಖ ಆರೋಪಿ ಪ್ರಭಾವಶಾಲಿ ವ್ಯಕ್ತಿಯ ಪುತ್ರನಾಗಿದ್ದು. ತನಿಖೆ ನಡೆಸುತ್ತಿರುವ ಪೊಲೀಸ್ ಠಾಣೆ, ಶಾಸಕರ ಕ್ಷೇತ್ರದ ವ್ಯಾಪ್ತಿಯಲ್ಲಿದೆ, ಹೀಗಾಗಿ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಹಿಗಾಗಿ ತನಿಖೆ ನಡೆಸಲು ಸಿಬಿಐ ಸೂಕ್ತವಾಗಿದೆ ಎಂದು ಹಿರಿಯ ವಕೀಲ, ಎಂ.ಟಿ ನಾಣಯ್ಯ ಹೇಳಿದ್ದಾರೆ..