ವಿದ್ಯಾರಣ್ಯಪುರ, ಕೆಆರ್ ಮೊಹಲ್ಲಾ, ದೇವರಾಜ ಮೊಹಲ್ಲಾ, ಕುವೆಂಪುನಗರ, ಸರಸ್ವತಿಪುರ, ದಟ್ಟಗಳ್ಳಿ, ಕೆ.ಜಿ.ಕೊಪ್ಪಳ, ಜಯಲಕ್ಷ್ಮಿಪುರ, ಗೋಕುಲಂ, ವಿವಿ.ಪುರಂ, ವಿಜಯನಗರ, ಯೆಲ್ವಾಳ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿನ್ನೆ ಮಧ್ಯಾಹ್ನ 12.30 ರಿಂದ 1 ಗಂಟೆ ಸುಮಾರಿಗೆ ನಿಗೂಢ ಶಬ್ಧವೊಂದು ಕೇಳಿಸಿದೆ. ಈ ವೇಳೆ ಭಯಗೊಂಡ ಜನರು ಮನೆ ಹಾಗೂ ಕಚೇರಿಗಳಿಗೆ ಹೊರಗೆ ಓಡಿಬಂದಿದ್ದಾರೆ.