ಮಧ್ಯಾಹ್ನ 12.25ರ ಸುಮಾರಿಗೆ ವಿಂಧ್ಯ ಗಿರಿಯ ಪಶ್ಚಿಮದ ಪ್ರವೇಶದ್ವಾರದ ಬಳಿ ಪತ್ನಿ ಚನ್ನಮ್ಮ ಅವರೊಂದಿಗೆ ಕಾರಿನಲ್ಲಿ ಬಂದಿಳಿದ ದೇವೇಗೌಡರಿಗೆ ಡೋಲಿಗಳನ್ನು ಕಾಯ್ದಿರಿಸಲಾಗಿತ್ತು. ಅದರೆ ಡೋಲಿ ಹತ್ತಲು ನಿರಾಕರಿಸಿ ಮೆಟ್ಟಲುಗಳನ್ನು ಹತ್ತಿಯೇ ಬಾಹುಬಲಿಗೆ ಅಭಿಷೇಕ ನೆರವೇರಿಸುವುದಾಗಿ ಹೇಳಿದಾಗ ಅವರ ಅಂಗರಕ್ಷಕರು, ಜೆಡಿಎಸ್ ಮುಖಂಡರು ಅವಕ್ಕಾದರು. ಅಂಗರಕ್ಷಕರ ಹೆಗಲ ಮೇಲೆ ಮಾಮೂಲಿನಂತೆ ಕೈ ಹಾಕಿಕೊಂಡು ಮೆಟ್ಟಿಲೇರಲು ಆರಂಭಿಸಿದರು.