ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಲಬುರ್ಗಿಯಲ್ಲಿ ಮಾತನಾಡಿದ್ದು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ, ರಾಜ್ಯದಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚುತ್ತಿವೆ. ಸಿದ್ದರಾಮಯ್ಯ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರವೆಂದರೆ ಸಿದ್ದರಾಮಯ್ಯ ಎನ್ನುವಷ್ಟರ ಮಟ್ಟಿಗೆ ಈ ಎರಡೂ ಶಬ್ದಗಳು ಅನ್ವರ್ಥವಾಗಿವೆ ಎಂದು ಹೇಳಿದ್ದಾರೆ.