ಈ ಬಾರಿ ಮೈಸೂರು ರಾಜವಂಶಸ್ಥ ಯದುವೀರ್, ಮಾಜಿ ಪ್ರಧಾನಮಂತ್ರಿ ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಟ್ಟ ಏರಿ ಬಾಹುಬಲಿಗೆ ಅಭಿಷೇಕ ಮಾಡಿದ್ದು ವಿಶೇಷವಾಗಿತ್ತು. ಕುಡಿಯುವ ನೀರು, ಶೌಚಾಲಯ, ವಿದ್ಯುತ್, ವಸತಿ, ರಸ್ತೆ, ರೈಲು, ಬೆಟ್ಟ ಏರುವವರಿಗೆ ಡೋಲಿ, ಪೊಲೀಸ್ ಬಿಗಿ ಬಂದೋಬಸ್ತ್ ಸೇರಿ ಅಚ್ಚುಕಟ್ಟು ವ್ಯವಸ್ಥೆಗಳನ್ನು ಮಾಡಿಲಾಗಿತ್ತು. ಒಟ್ಟಾರೆಯಾಗಿ ಈ ಬಾರಿಯ ಬಾಹಬಲಿ ಮಹಾಮಜ್ಜನ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.