ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ಮೂವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಿಣಗಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರವಾರ: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ಮೂವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಿಣಗಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರಲ್ಲಿ ಈ ಅವಘಡ ಸಂಭವಿಸಿದ್ದು ನೌಕಾಪಡೆಯ ಉದ್ಯೋಗಿ ಅಮಿತ್ ಕೌಶಲ್ (32) ಪತ್ನಿ ಜ್ಯೋತಿ (28) ಮತ್ತು ಮಗು ಸಾವನ್ನಪ್ಪಿದ್ದಾರೆ.
ಕದಂಬ ನೌಖಾ ನೆಲೆಯ ಉದ್ಯೋಗಿಯಾಗಿದ್ದ ಅಮಿತ್ ಇಂದು ಬಿಣಗಾದಿಂದ ಕಾರವಾರ ಕಡೆ ಬೈಕ್ ನಲ್ಲಿ ಬರುತ್ತಿರುವಾಗ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಸಂಬಂಧ ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.