ಕಾರವಾರ: ಭೀಕರ ಅಪಘಾತಕ್ಕೆ ಮಗು ಸೇರಿ ಮೂವರು ಬಲಿ

ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ಮೂವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಿಣಗಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರವಾರ: ಭೀಕರ ಅಪಘಾತಕ್ಕೆ ಮಗು ಸೇರಿ ಮೂವರು  ಬಲಿ
ಕಾರವಾರ: ಭೀಕರ ಅಪಘಾತಕ್ಕೆ ಮಗು ಸೇರಿ ಮೂವರು ಬಲಿ
Updated on
ಕಾರವಾರ: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ಮೂವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಿಣಗಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 
ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರಲ್ಲಿ ಈ ಅವಘಡ ಸಂಭವಿಸಿದ್ದು ನೌಕಾಪಡೆಯ ಉದ್ಯೋಗಿ ಅಮಿತ್‌ ಕೌಶಲ್‌ (32) ಪತ್ನಿ ಜ್ಯೋತಿ (28) ಮತ್ತು ಮಗು ಸಾವನ್ನಪ್ಪಿದ್ದಾರೆ.
ಕದಂಬ ನೌಖಾ ನೆಲೆಯ ಉದ್ಯೋಗಿಯಾಗಿದ್ದ ಅಮಿತ್  ಇಂದು ಬಿಣಗಾದಿಂದ ಕಾರವಾರ ಕಡೆ ಬೈಕ್ ನಲ್ಲಿ ಬರುತ್ತಿರುವಾಗ ಎದುರಿನಿಂದ ಬಂದ  ಟಿಪ್ಪರ್ ಡಿಕ್ಕಿ ಹೊಡೆದಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಸಂಬಂಧ ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com