ಇದಕ್ಕೆ ಪ್ರತಿವಾದ ಮಂಡಿಸಿದ ಸರ್ಕಾರಿ ವಿಶೇಷ ಅಭಿಯೋಜಕ ಆರೋಪಿಗಳು ಪ್ರಭಾವಿಯಾಗಿದ್ದಕ್ಕೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರು. ಪೊಲೀಸರು ಹಲ್ಲೆಗೊಳಗಾದವನನ್ನು ರಕ್ಷಣೆ ಮಾಡುವುದು ಬಿಟ್ಟು ಆತ ಕುಡಿದಿದ್ದಾನಾ ಎಂದು ಪರೀಕ್ಷಿಸಿದ್ದಾರೆ. ಇನ್ನು ವಿದ್ವತ್ ಐಸಿಯೂನಿಂದ ವಾರ್ಡ್ ಗೆ ಶಿಫ್ಟ್ ಆಗಿದ್ದಾನೆ ಎಂಬ ಕಾರಣಕ್ಕೆ ಆರೋಪಿಗಳಿಗೆ ಜಾಮೀನು ನೀಡಬೇಕಾ? ಎಂದು ಶ್ಯಾಂ ಸುಂದರ್ ಪ್ರಶ್ನಿಸಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶರು ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದಾರೆ.