ಈ ಜಿಲ್ಲೆಗಳ ಸ್ಥಿತಿಗತಿ ಕುರಿತು 70 ಸೂಚ್ಯಂಕಗಳನ್ನು ಮೊದಲು ಗುರುತಿಸಲಾಗುವುದು. ಯಾವ ಕ್ಷೇತ್ರದಲ್ಲಿ ಹಿಂದುಳಿದಿದೆ ಎಂಬ ಬಗ್ಗೆ ತಲಸ್ಪರ್ಶಿ ಪರಿಶೀಲನೆ ನಡೆಸಿದ ನಂತರ ಯೋಜನೆ ಸಿದ್ಧಪಡಿಸಲಾಗುವುದು. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಕೃಷಿ ಹಾಗೂ ಆರ್ಥಿಕ ಒಳಗೊಳ್ಳುವಿಕೆ ಹೀಗೆ ಐದು ಕ್ಷೇತ್ರಗಳಿಗೆ ಆದ್ಯತೆ ನೀಡಿ ಏಪ್ರಿಲ್ ಅಂತ್ಯದ ಹೊತ್ತಿಗೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.