ಅನುಮಾನಾಸ್ಪದ ವಸ್ತು ಪತ್ತೆಯಾಗಿರುವುದನ್ನು ಉತ್ತರಕನ್ನಡ ಜಿಲ್ಲೆಯ ಎಸ್'ಪಿ ವಿನಾಯಕ್ ಪಾಟೀಲ್ ಅವರು ದೃಢಪಡಿಸಿದ್ದು, ಎಫ್ಎಸ್ಎಲ್ ತಜ್ಞರಿಗೆ ಅನುಮಾನಾಸ್ಪದ ವಸ್ತು ದೊರಕಿದ್ದು, ವಸ್ತುವನ್ನು ತೆಗೆದು ನೋಡಲು ನ್ಯಾಯಾಲಯದ ಅನುಮತಿಯನ್ನು ಕೇಳಲಾಗಿದೆ. ನ್ಯಾಯಾಲಯ ಅನುಮತಿ ನೀಡುತ್ತಿದ್ದಂತೆಯೇ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳು ಈಗಾಗಲೇ ಘಟನಾ ಸ್ಥಳದಲ್ಲಿದ್ದ ರಕ್ತದ ಮಾದರಿ ಹಾಗೂ ಬಟ್ಟೆಗಳ ತುಂಡುಗಳು ಹಾಗೂ ಇನ್ನಿತರೆ ವಸ್ತುಗಳನ್ನು ತೆಗೆದುಕೊಂಡಿದ್ದು ಪರಿಶೀಲನೆ ನಡೆಸಲಾಗುತ್ತಿದ್ದಾರೆಂದು ಹೇಳಿದ್ದಾರೆ.