ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 'ವಂಡರ್ ಲಾ'ಗೆ ನುಗ್ಗಿದ ಚಿರತೆ ಸೆರೆ ಹಿಡಿದ ಅರಣ್ಯ ಸಿಬ್ಬಂದಿ

ಬೆಂಗಳೂರಿನ ಹೊರವಲಯದ ಬಿಡದಿ ಬಳಿ ಇರುವ ವಂಡರ್‌ ಲಾ ಅಮ್ಯೂಸ್‌ಮೆಂಟ್‌ ಪಾರ್ಕ್ ಗೆ ಬುಧವಾರ....
ಬೆಂಗಳೂರು: ಬೆಂಗಳೂರಿನ ಹೊರವಲಯದ ಬಿಡದಿ ಬಳಿ ಇರುವ ವಂಡರ್‌ ಲಾ ಅಮ್ಯೂಸ್‌ಮೆಂಟ್‌ ಪಾರ್ಕ್ ಗೆ ಬುಧವಾರ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. 
ಇಂದು ಮಧ್ಯಾಹ್ನ ಚಿರತೆಯೊಂದು ವಂಡರ್ ಲಾಗೆ ನುಗಿತ್ತು. ಇದರಿಂದ ಪ್ರವಾಸಿಗರು ಮತ್ತು ಸಿಬ್ಬಂದಿ ಆತಂಕಕ್ಕೀಡಾಗಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಅರಣ್ಯಾಧಿಕಾರಿಗಳು ಮತ್ತು ಬಿಡದಿ ಪೊಲೀಸರು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬನ್ನೇರುಘಟ್ಟ ವೈದ್ಯರಿಂದ ಅರಿವಳಿಕೆ ಮದ್ದು ನೀಡಿ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ನುಗ್ಗಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ.
ಪಕ್ಕದ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಿರತೆಯು ಪಾರ್ಕಿನ ಒಳಗೆ ಪ್ರವೇಶಿಸಿತು ಎನ್ನಲಾಗಿದೆ.
ವಂಡರ್‌ ಲಾ ಒಳಗೆ‌ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರಿದ್ದು ತೀವ್ರ ಆತಂಕಗೊಂಡಿದ್ದರು. 

Related Stories

No stories found.

Advertisement

X
Kannada Prabha
www.kannadaprabha.com