ಭಕ್ತೆಯೊಬ್ಬರ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಹಾಗೂ ಅವರ ಐವರ ಶಿಷ್ಯರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ, ವಂಚನೆ, ಅತ್ಯಾಚಾರ, ಅಸಹಜ ಲೈಂಗಿಕ ಕ್ರಿಯೆ, ಜೀವ ಬೆದರಿಕೆ ಆರೋಪ ಹೊರಿಸಲಾಗಿದೆ. ಈ ಸಂಬಂಧ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ.ಈ ದೋಷಾರೋಪ ಪಟ್ಟಿ ಆಧರಿಸಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್, 2017ರ ಡಿಸೆಂಬರ್ನಲ್ಲಿ ರಾಮನಗರ ಸೆಷನ್ಸ್ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು.