ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕದ ಕಾರ್ಯದರ್ಶಿ ಡಾ.ಬಿ.ವೀರಣ್ಣ ಅವರು ಮಾತನಾಡಿ, ಪ್ರತಿಭಟನೆ ಕುರಿತ ಸಂದೇಶವನ್ನು 177 ಐಎಂಎ ಶಾಖೆಗಳಿಗೆ ರವಾನಿಸಲಾಗಿದೆ. ಕೆಲ ಆಸ್ಪತ್ರೆಗಳು ಬಂದ್'ಗೆ ಬೆಂಬಲ ನೀಡುವುದಾಗಿ ತಿಳಿಸಿವೆ. ಆದರೆ, ಎಷ್ಟು ಆಸ್ಪತ್ರೆಗಳ ಹೊರರೋಗಿಗಳ ವಿಭಾಗ ಬಂದ್ ಆಗಲಿದೆ ಎಂಬುದರ ಕುರಿತಂತೆ ಖಚಿತ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.
ಪ್ರೈವೇಟ್ ಹಾಸ್ಪಿಟಲ್ಸ್ ಆ್ಯಂಡ್ ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (ಪಿಹಚ್ಎಎನ್ಎ) ಉಪಾಧ್ಯಕ್ಷ ಡಾ.ಮದನ್ ಗಾಯಕ್ವಾಡ್ ಮಾತನಾಡಿ, ಬಂದ್'ಗೆ ಬೆಂಬಲ ನೀಡುವುದು ಆಯಾ ಆಸ್ಪತ್ರೆಗಳಿಗೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ.
ಮಣಿಪಾಲ್ ಆಸ್ಪತ್ರೆಯ ಅಧ್ಯಕ್ಷ ಡಾ.ಸುದರ್ಶನ್ ಬಲ್ಲಾಳ್ ಅವರು ಮಾತನಾಡಿ, ಆಸ್ಪತ್ರೆ ಎಂದಿನಂತೆ ಸೇವೆಯನ್ನು ಮುಂದುವರೆಸಲಿದೆ. ಸಮಿತಿಯನ್ನು ಹೇಗೆ ರಚನೆ ಮಾಡಲಾಗಿದೆ ಎಂಬುದರ ಬಗ್ಗೆ ಚರ್ಚೆ ನಡೆಸಬೇಕಿದೆ. ಆಯೋಗದ ಸದಸ್ಯರನ್ನು ನೇಮಕ ಮಾಡಿರುವುದು ಪಾರದರ್ಶಕವಾಗಿಲ್ಲ. ಅಲೋಪತಿ ಬಗ್ಗೆ ಅಧ್ಯಯನ ನಡೆಸದವರಿಗೆ ಅಲೋಪತಿ ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಚರ್ಚೆ ನಡೆಯಬೇಕಿದೆ ಎಂದು ತಿಳಿಸಿದ್ದಾರೆ.