ಮಂಗಳೂರು: ಹಿಂದು ಕಾರ್ಯಕರ್ತನ ಬರ್ಬರ ಹತ್ಯೆ

ಹಿಂದೂಪರ ಸಂಘಟನೆಯ ಕಾರ್ಯಕರ್ತನಾಗಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೀಪಕ್‌
ದೀಪಕ್‌
Updated on
ಮಂಗಳೂರು: ಹಿಂದೂಪರ ಸಂಘಟನೆಯ ಕಾರ್ಯಕರ್ತನಾಗಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಕಾಟಿಪಳ್ಳದಲ್ಲಿ ಈ ಹತ್ಯೆ ನಡೆದಿದ್ದು ಮೃತ ಯುವಕನನ್ನು ದೀಪಕ್‌ ಎಂದು ಗುರುತಿಸಲಾಅಗಿದೆ.
ಸಿಮ್ ಕಾರ್ಡ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ ದೀಪಕ್ ಕಾಟಿಪಳ್ಳದ ಕೈಕಂಬ ನಿವಾಸಿಯಾಗಿದ್ದರು. ಇಂದು ಅವರು ಕಾಟಿಪಳ್ಳದ ಮೊಬೈಲ್ ಅಂಗಡಿಗಳಿಗೆ ಸಿಮ್ ಕಾರ್ಡ್ ಡಿಸ್ಟ್ರಿಬ್ಯೂಟ್ ಗಾಗಿ ತೆರಳಿದ್ದರು. ಆ ವೇಳೆ ದುಷ್ಕರ್ಮಿಗಳು ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು  ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಘಟನೆ ವರದಿಯಾಗುತ್ತಿದ್ದಂತೆಯೇ ಸುತ್ತಮುತ್ತಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು 
ಘಟನೆ ಬಗ್ಗೆ ಪ್ರತ್ಯಕ್ಷ ದರ್ಶಿಯೊಬ್ಬರು ಮಾಹಿತಿ ನೀಡಿದ್ದು, ಮಧ್ಯಾಹ್ನ 1:30 ರ ವೇಳೆಗೆ ದೀಪಕ್ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಯುವಕರ ಗುಂಪೊಂದು ಅಡ್ಡ ಹಾಕಿತ್ತು. ದೀಪಕ್ ತಪ್ಪಿಸಿಕೊಳ್ಳುವುದಕ್ಕೂ ಮುನ್ನ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ದಾಳಿಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ದೀಪಕ್ ನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com