ಮಾಧ್ಯಮಗಳ ವರದಿ ಪ್ರಕಾರ ದೀಪಕ್ ನ್ನು ಹತ್ಯೆ ಮಾಡಿ ಪರಾರಿಯಾಗುತ್ತಿದ್ದಾಗ ಪೊಲೀಸರು ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಫೈರಿಂಗ್ ನಡೆಸಿ ಬಂಧಿಸಿದ್ದಾರೆ, ಈ ವೇಳೆ ಓರ್ವ ಆರೋಪಿ ಕಾಲಿಗೆ ಗುಂಡು ತಗುಲಿದೆ ಎಂದು ತಿಳಿದುಬಂದಿದೆ.
ದೀಪಕ್ ಹತ್ಯೆ ಹಿನ್ನೆಲೆಯಲ್ಲಿ ಕಾಟಿಪಳ್ಳ, ಸುರತ್ಕಲ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. 5 ಕೆಎಸ್ಆರ್ ಪಿ ತುಕಡಿ 6 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.