ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು, ನೆಹರು ಕುಟುಂಬಕ್ಕೆ ಹಿಂದಿನಿಂದಲೂ ಶೃಂಗೇರಿ ಮಠದೊಂದಿಗೆ ಬಾಂಧವ್ಯವಿದೆ. ಮಾಜಿ ಪ್ರಧಾನಮಂತ್ರಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಕೂಡ ಕರ್ನಾಟಕ ಭೇಟಿ ಸಂದರ್ಭದಲ್ಲಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದರು. ಇದೀಗ ರಾಹುಲ್ ಗಾಂಧಿ ಕೂಡ ಮಠಕ್ಕೆ ಭೇಟಿ ನೀಡುತ್ತಿದ್ದು, ಇದರಲ್ಲಿ ಅಂತಹ ವಿಶೇಷವೇನೂ ಇಲ್ಲ ಎಂದು ಹೇಳಿದ್ದಾರೆ.