ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿದ್ದ ದೀಪಕ್ ಶವವನ್ನು ಪೊಲೀಸರು ರಹಸ್ಯವಾಗಿ ಕಾಟಿಪಳ್ಳ ಗ್ರಾಮಕ್ಕೆ ರವಾನಿಸಿದ್ದಾರೆ ಎಂದು ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದ ಗ್ರಾಮಸ್ಥರನ್ನು ಸಮಾಧಾನಗೊಳಿಸುವಲ್ಲಿ ಕೊನೆಗೂ ಮಂಗಳೂರು ಜಿಲ್ಲಾಡಳಿತ ಯಶಸ್ವಿಯಾಗಿದ್ದು, ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡುವುದಾಗಿ ಭರವಸೆ ನೀಡಿದೆ. ಈ ಪೈಕಿ 5 ಲಕ್ಷ ರು.ಗಳನ್ನು ಜಿಲ್ಲಾಡಳಿತ ನೀಡಲಿದ್ದು, ಉಳಿದ 5 ಲಕ್ಷ ರು.ಗಳನ್ನು ಸಿಎಂ ಪರಿಹಾರ ನಿಧಿಯಿಂದ ಕೊಡಿಸಲಾಗುತ್ತದೆ ಎಂದು ಡಿಸಿ ಸಸಿಕಾಂತ್ ಸೆಂಥಿಲ್ ಭರವಸೆ ನೀಡಿದ್ದಾರೆ.