ಇನ್ನು ಇಂಡಿಯನ್ ಎಕ್ಸ್ ಪ್ರೆಸ್ ಗೆ ಸಿಕ್ಕಿರುವ ವರದಿ ಪ್ರತಿ ಹೇಳಿದಂತೆ ದಕ್ಷಿಣದ ನಾಲ್ಕು ರಾಜ್ಯಗಳಾದ ಕರ್ನಾಟಕ, ಆಂದ್ರ ಪ್ರದೇಶ, ತಮಿಳು ನಾಡು ಹಾಗೂ ಕೇರಳಗಳಲ್ಲಿ ಅಂತರ್ಜಲ ಪ್ರಮಾಣ ತೀವ್ರತರವಾಗಿ ಕುಸಿದಿದೆ. ಇದರಲ್ಲಿ ಆಂದ್ರ ಪ್ರದೇಶದಲ್ಲಿ ಶೇ.75 ರಷ್ಟು ಬಾವಿಗಳಲ್ಲಿ ನೀರಿನ ಕೊರತೆ ಇದ್ದರೆ ತಮಿಳು ನಾಡಿನ 87 ಹಾಗು ಕೇರಳದ 70 ಶೇ. ಬಾವಿಗಳು ಒಣಗುವ ಸೂಚನೆ ಇದೆ. ತೆಲಂಗಾಣ, ಮಧ್ಯ ಪ್ರದೇಶ, ರಾಜಸ್ಥಾನ, ತ್ರಿಪುರಾ ಹಾಗು ಗುಜರಾತ್ ಗಳಲ್ಲಿ ಅಂತರ್ಜಲ ಮಟ್ಟ ದಕ್ಷಿಣ ರಾಜ್ಯಗಳಿಗಿಂತ ಉತ್ತ್ಮ ಸ್ಥಿತಿಯಲ್ಲಿದೆ ಎಂದು ವರದಿಯಲ್ಲಿ ಹೇಳಿದೆ.