ಹತ್ಯೆ ಸಂಬಂಧ ಜಿಲ್ಲೆಯಲ್ಲಿ ಉಂಟಾಗಿರುವ ಪರಿಸ್ಥಿತಿಗೆ ಸಂಬಂಧಿಸಿದಂ.ತೆ ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್, ಶವಯಾತ್ರೆಗಾಗಿ ಯಾರೂ ಕೂಡ ತಮ್ಮ ಬಳಿ ಅನುಮತಿ ಕೋರಿಲ್ಲ. ನಾವೂ ಕೂಡ ಅನುಮತಿ ನೀಡಿಲ್ಲ. ಹೀಗಾಗಿ ಶವಯಾತ್ರೆ ನಡೆಸುವ ಮಾತೇ ಇಲ್ಲ. ಇನ್ನು ಪ್ರಸ್ತುತ ಮಂಗಳೂರಿನಲ್ಲಿ ಕೂನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವರಿಂದ ಸೂಚನೆಗಳು ಬಂದಿದ್ದು, ನಾವು ಅದನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದರು.