ಶನಿವಾರ ವಿಕಾಸಸೌಧದಲ್ಲಿ ನಡೆದ ಸಮಿತಿಯ ಮೊದಲ ಸಭೆ ನಂತರ ಮಾತನಾಡಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್, "ಸಮಿತಿ ಮುಂದೆ ಬಹು ದೊಡ್ಡ ಜವಾಬ್ದಾರಿ ಇದೆ. ಈ ವಿಚಾರವನ್ನು ಕಾನೂನಾತ್ಮಕವಾಗಿ ಅಧ್ಯಯನ ನಡೆಸಬೇಕು. ಇದಕ್ಕೆ ಹೆಚ್ಚು ಸಮಯ ತಗುಲುವುದರಿಂದ ಕಾಲಾವಕಾಶ ವಿಸ್ತರಣೆಗೆ ಕೋರಲು ತೀರ್ಮಾನಿಸಿದ್ದೇವೆ. ಈ ವಿಚಾರ ಕುರಿತಂತೆ ಯಾವ ಮದ್ಯಂತರ ವರದಿ ಸಲ್ಲಿಸುವುದಿಲ್ಲ." ಎಂದರು.