ಬಂದ್ ಕರೆಗೆ ಹುಬ್ಬಳ್ಳಿಯಲ್ಲಿ ಬೆಂಬಲ ವ್ಯಕ್ತವಾಗಿದ್ದು, ರಸ್ತೆಗಳಲ್ಲಿ ಬಸ್ ಹಾಗೂ ಆಟೋ ರಿಕ್ಷಾ ಸಂಚಾರಗಳು ಸಂಪೂರ್ಣವಾಗಿ ಬಂದ್ ಆಗಿದೆ.
ಇಂದು ಬೆಳಿಗ್ಗೆ ಕೆಲವರು ಹಳೇ ಬಸ್ ನಿಲ್ದಾಣದ ಬಳಿ ಬಸ್ ಗಳ ಮೇಲೆ ಕಲ್ಲು ತೂರಾಟವನ್ನು ನೆಡಸಿದ್ದು, ದೇಶಪಾಂಡೆ ನಗರದಲ್ಲಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿರುವುದಾಗಿ ವರದಿಗಳು ತಿಳಿಸಿವೆ. ಇದಲ್ಲದೇ, ರಸ್ತೆಗಳಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಗಳ ಮೇಲೂ ಕಲ್ಲೂ ತೂರಾಟಗಳು ನಡೆದಿದೆ ಎಂದು ಹೇಳಲಾಗುತ್ತಿದೆ. ರಸ್ತೆಗಳಲ್ಲಿ ಹಲವು ಯುವಕರು ಕೈಗಳಲ್ಲಿ ಕಲ್ಲುಗಳನ್ನು ಹಿಡಿದು ದ್ವಿಚಕ್ರ ವಾಹನ ಚಾಲಕರಿಗೆ ಬೆದರಿಕೆಗಳನ್ನು ಹಾಕಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿದೆ ಎಂದು ತಿಳಿದುಬಂದಿದೆ.