ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿಲ್ಲ. . ಬೆಂಗಳೂರು ಗ್ರಾಮೀಣ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕಡಿಮೆಯಾಗಿದ್ದು ,ಪ್ರಸಕ್ತ ವರ್ಷದಲ್ಲಿ ಕೇವಲ ಎರಡು ಪ್ರಕರಣಗಳು ವರದಿಯಾಗಿವೆ. ಅಧಿಕೃತ ಅಂಕಿಅಂಶಗಳು ತಮ್ಮ ಜೀವನದ ಅಂತ್ಯಗೊಳಿಸಿಕೊಂಡಿದ್ದ ರೈತರ ನಿಖರವಾದ ಸಂಖ್ಯೆಯನ್ನು ಸರ್ಕಾರಿ ದಾಖಲೆಗಳು ನೀಡುವುದಿಲ್ಲ, "ಕಳೆದ ನಾಲ್ಕು ವರೆ ವರ್ಷಗಳಲ್ಲಿ ಸುಮಾರು 4,000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ." ಎಂದು ಕರ್ನಾಟಕ ರಾಜ್ಯ ಕಬ್ಬು ಬೆಲೆಗರಾರಾ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಎಕ್ಸ್ ಪ್ರೆಸ್ ಗೆ ತಿಳಿಸಿದರು "ನಮ್ಮ ಸರ್ಕಾರದ ವಿವಿಧ ಯೋಜನೆಗಳಿಂದ ಆತ್ಮಹತ್ಯಾ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆಗೆ ಅವರ ಸಾಲಬಾಧೆಯು ಸಾಮಾನ್ಯ ಕಾರಣವಾಗಿದೆ" ಎಂದು ಅವರು ಹೇಳಿದ್ದಾರೆ.