ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು , ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜಕಾಲುವೆಗೆ ತಡೆಗೋಡೆಯಂತಹ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದ ವಾರ್ಡ್'ನ ಸಹಾಯಕ ಎಂಜಿನಿಯರ್ ನನ್ನು ಅಮಾನತು ಮಾಡಿದ್ದಾರೆ. ಅಲ್ಲದೆ ಮಗುವಿನ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.