ಇತ್ತೀಚೆಗೆ ನರಸಪ್ಪ ಎಂಬ ಪೊಲೀಸ್ ಕಾನ್ಸ್ ಟೇಬಲ್ ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದು ಸೆಲ್ಯೂಟ್ ಹೊಡೆದು, ಅಮ್ಮ ನೀವು ಅಂದು ಕುರಿಗಾಹಿಯಾಗಿದ್ದ ನನ್ನ ಶಾಲೆಗೆ ಸೇರಿಸಿದ್ದರಿಂದಲೇ ಇಂದು ನಾನು ಕಾನ್ಸ್ ಟೇಬಲ್ ಆಗಿದ್ದೇನೆ ಎಂದು ಕಥೆ ಹೇಳಿದ್ದ. ನನಗೆ ನಿಜಕ್ಕೂ ನಂಬಲಿಕ್ಕೆ ಆಗಿಲ್ಲ, ಸಣ್ಣ ಉಪಕಾರವೂ ಹೇಗೆ ಉತ್ತಮ ಪರಿಣಾಮ ಬೀರುತ್ತೆ ಎಂಬುದಕ್ಕೆ ಇದು ಸಾಕ್ಷಿ ಎಂದು ರತ್ನಪ್ರಭಾ ಅವರು ಟ್ವೀಟ್ ಮಾಡಿದ್ದರು.