ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ವಿಷಯ ಖಚಿತಪಡಿಸಿದ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಬಿಎಂಆರ್ ಸಿಎಲ್ ನ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್, ಬಿಎಂಆರ್ ಸಿಎಲ್ ಪ್ರಸ್ತಾಪ ಮಾಡಿರುವ ತಾಂತ್ರಿಕ, ಹಣಕಾಸು ಮತ್ತು ತಾರ್ಕಿಕ ಪರಿಹಾರಗಳನ್ನು ಸರ್ಕಾರ ಅನುಮೋದಿಸಿದೆ. ಅದರ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.