ಭಾರತಕ್ಕೆ ತುರ್ತಾಗಿ ಎರಡನೇ ರಾಜಧಾನಿಯ ಅಗತ್ಯವಿದೆ. ಇಂತಹ ಮಹತ್ವದ ಹೊಣೆ ನಿಭಾಯಿಸಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಭಾರತದಂತಹ ವಿಶಾಲ ರಾಷ್ಟ್ರವನ್ನು ಒಂದು ನಗರದಿಂದ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ವಿಶೇಷವಾಗಿ ಸರ್ಕಾರವು ಆಡಳಿತ, ರಚನಾತ್ಮಕ ಸುಧಾರಣೆ, ರಾಷ್ಟ್ರ ಮರುನಿರ್ಮಾಣ,, ಅಂತರಾಷ್ಟ್ರೀಯ ಸಹಭಾಗಿತ್ವಕ್ಕೆ ಸಂಬಂಧಿಸಿದಂತೆ ಮಾದರಿಯಾಗಿ ಹಾಗೂ ಅಮೂಲಾಗ್ರ ಬದಲಾವಣೆಗೆ ಸಿದ್ಧತೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರನ್ನು ಎರಡನೇ ರಾಜಧಾನಿಯನ್ನಾಗಿ ಮಾಡುವ ಅಗತ್ಯತೆ ಹೆಚ್ಚಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.