ಇಂದು ಬೆಳಗ್ಗೆ ಮಂಗಳೂರಿನ ಜಪ್ಪು ಕುಡ್ಪಾಡಿ ಪ್ರದೇಶದಲ್ಲಿರುವ ಫ್ಲಾಟ್ ಗೆ ನುಗ್ಗಿದ್ದ ದುಷ್ಕರ್ಮಿಗಳು ಇಲಿಯಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ರೌಡಿ ಇಲಿಯಾಸ್ ನ ಎದೆ, ಬೆನ್ನು ಮತ್ತು ಹೊಟ್ಟೆಗೆ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಲಿಯಾಸ್ ನನ್ನು ಕೂಡಲೇ ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಇನ್ನು ಇಲಿಯಾಸ್ ತನ್ನ ಮೇಲೆ ದುಷ್ಕರ್ಮಗಿಳು ದಾಳಿ ನಡೆಸುತ್ತಿದ್ದಂತೆಯೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು, ಮೂರನೇ ಮಹಡಿಯವರೆಗೂ ಓಡಿ ಹೋಗಿದ್ದಾನೆ. ಈ ವೇಳೆ ಅತನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಪದೇ ಪದೇ ಇರುದ ಘಾಸಿಗೊಳಿಸಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ.