ಇಂದು ರಾಜ್ಯ ಪೊಲೀಸ್ ಮಹಾ ನಿದೇರ್ಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶಕ್ಕೆ ಚಾಲನೆ ನೀಡಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಮೂಲಭೂತ ಸಂಘಟನೆ ಯಾವುದೇ ವಿಭಾಗಕ್ಕೆ ಸೇರಿದರೂ ಅವುಗಳ ಮೇಲೆ ಸೂಕ್ಷ್ಮ ನಿಗಾವಹಿಸಬೇಕು. ಇನ್ನು ಮೂರು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ೫೦೦೦೦ಕ್ಕೂ ಅಧಿಕ ಬೂತ್ಗಳಿರುತ್ತವೆ. ಅವುಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಪರಿಗಣಿಸಿ ಅವುಗಳ ಮೇಲೆ ವಿಶೇಷಗಮನ ಹರಿಸಬೇಕು ಎಂದು ಸೂಚಿಸಿದರು.