ಶಾಲೆಗೆ ಹೋಗಿದ್ದ ಮಕ್ಕಳು ಹಾಗೂ ನೆರೆಯವರಿಗೆ ತನ್ನ ಪತಿ ಸಹಜವಾಗಿ ಸತ್ತಿದ್ದಾನೆಂದು ಬಿಂಬಿಸಲು ಪ್ರಯತ್ನಿಸಿದ ದೀಪ್ತಿಯ ಕೃತ್ಯ ಪೋಲೀಸರ ವಿವರವಾದ ತನಿಖೆ ಬಳಿಕ ಬೆಳಕಿಗೆ ಬಂದಿದೆ. ಪೋಲೀಸರು ಮಹೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದಾಗ ಇದು ಸಹಜ ಸಾವಲ್ಲ, ಕೊಲೆ ಎನ್ನುವುದು ತಿಳಿದಿದೆ.ತನಿಖೆ ನಡೆಸಿದ ಪೋಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ಪ್ರಕಟಿಸಿದೆ.